ಸೆಳೆಹಿತದಿಕಸ ಶರಧಿಸೇರುಗೆ
ಕೆಳೆಹಿತದಧಮ ಹಿರಿದುಕಾಂಬುಗೆ
ಕಳೆಹಿತದಭಾಮಿನಿಯು ಶರಣಗೆ ದಾರಿ ತೋರುವಳು
ತಳೆದೆನೀಗಲೆ ಕಾವ್ಯ ಸಂಶಯ
ಗೆಳೆಯಹಿತಜನರಿದನು ಪರಿಕಿಸಿ
"ನಳನಳಿಸದೆಯೆ ಸೋತರವರು ಪ್ರಕೃತಿಯೀಶ್ವರರು"
ಮೊದಲು, ಸಮಸ್ಯೆಯನ್ನು
"ನಳನಳಿಸದೆಯೆ ಸೋತರವರು ಪ್ರಕೃತೀಶ್ವರರು"
ಎಂಬುದಾಗಿರಿಸಿದ್ದೆ. ಅದರಲ್ಲಿ ಚ್ಛಂದೋದೋಷವಿತ್ತು.
ಗಣೇಶರ ಸಲಹೆಯಂತೆ, ಅದನ್ನು ಬದಲಿಸಿದ್ದೇನೆ.
ಸಮಸ್ಯೆ - ಭಾಮಿನಿಯಲ್ಲಿ ಕೊನೆಯ ಸಾಲು ಬರುವಂತೆ
"ನಳನಳಿಸದೆಯೆ ಸೋತರವರು ಪ್ರಕೃತಿಯೀಶ್ವರರು"