ವರುಷದಂತೆಯೆ ಮರಳಿ ವಾಸಂತಪಲ್ಲವವು
ಬರೆಯಲರಳುತಲಿಹುದು ಹೊಸಯುಗದ ಕಾವ್ಯವನು
ಖರಲೇಖನಿಯ ನಿಬ್ಬಿಗೆರೆಸಿ ಮಿದುಹಸಿರನ್ನು
ಬಾ ರಮಣಿ ಮಧುವೀಂಟು ಮೀಂಟು ವೀಣೆಯ ತನುವ.
ನೋವು ನಲಿವಿನ ಧರ್ಮ ಕಾಲನಿಬ್ಬಗೆಯಂತೆ
ಬೇವು ಬೆಲ್ಲದ ಹದವು ಬಾಳ ಋತವನಿವಾರ್ಯ
ಕಾವುದಾತನ ಕರ್ಮ ಕಾಯುವುದು ಭವಕಾರ್ಯ
ನಾವು ಬಯಸುವ ನೆಮ್ಮದಿಯ ಜೀವ ಸಂಕುಲಕೆ.
ತುಂಬು ಸಿಹಿ ಫಸಲುಕ್ಕಿ ಸುಗ್ಗಿ ತುಂಬಲಿ ಕಣಜ
ನಂಬುಗೆಯ ಪದ ಬಂಧಿಸಲಿಯೆಮ್ಮ ಜನಪದವ
ಅಂಬ! ಹಸಿವೆನ್ನುತಲಿ ಮಕ್ಕಳಳದಿರಲೆಂದು
ದುಂಬಿ ಗುನುಗುನುನಾದವರಳಲುದ್ಯಾನಗಳಲ್ಲಿ.
ಉತ್ತರೋತ್ತರಕೊಳಿತ ಬಯಸುತ್ತ ಸುಖಿಸೋಣ
ಮತ್ತೆ ಚೈತ್ರದ ಕಾಲಕಾನೊ ನೀನೋ ಕಾಣೆ..
ನವ ವಸಂತದ ಸಂತಸದ ಸಂತ ಮನದಂತೆ
ಪ್ರತ್ಯುತ್ತರಅಳಿಸಿಕವಿತೆ ಮುದವಹವು ಶ್ರೀಖರನ ಶ್ರೀಕರದಂತೆ
ಸವೆಯದಮೃತ ತರಲಿ ರಾಘವೋಕ್ತಿಯದಂತೆ
ಬುವಿ ಕಾವ ಕಳೆದು ಮೊಳೆಯಲಿ ಶಾಂತಿ ಚಿಗುರಂತೆ
chandra mouliyavare,
ಪ್ರತ್ಯುತ್ತರಅಳಿಸಿnimma muddaada kaamentupadyavu sihiyaagide:-)
dhanyavaadagalu..