ಶನಿವಾರ, ಏಪ್ರಿಲ್ 2, 2011

ಹೊಸ ವಸಂತಕ್ಕೆ ಹೀಗೊಂದು ಸ್ವಾಗತ

ವರುಷದಂತೆಯೆ ಮರಳಿ ವಾಸಂತಪಲ್ಲವವು
ಬರೆಯಲರಳುತಲಿಹುದು ಹೊಸಯುಗದ ಕಾವ್ಯವನು
ಖರಲೇಖನಿಯ ನಿಬ್ಬಿಗೆರೆಸಿ ಮಿದುಹಸಿರನ್ನು
ಬಾ ರಮಣಿ ಮಧುವೀಂಟು ಮೀಂಟು ವೀಣೆಯ ತನುವ.

ನೋವು ನಲಿವಿನ ಧರ್ಮ ಕಾಲನಿಬ್ಬಗೆಯಂತೆ
ಬೇವು ಬೆಲ್ಲದ ಹದವು ಬಾಳ ಋತವನಿವಾರ್ಯ
ಕಾವುದಾತನ ಕರ್ಮ ಕಾಯುವುದು ಭವಕಾರ್ಯ
ನಾವು ಬಯಸುವ ನೆಮ್ಮದಿಯ ಜೀವ ಸಂಕುಲಕೆ.

ತುಂಬು ಸಿಹಿ ಫಸಲುಕ್ಕಿ ಸುಗ್ಗಿ ತುಂಬಲಿ ಕಣಜ
ನಂಬುಗೆಯ ಪದ ಬಂಧಿಸಲಿಯೆಮ್ಮ ಜನಪದವ
ಅಂಬ! ಹಸಿವೆನ್ನುತಲಿ ಮಕ್ಕಳಳದಿರಲೆಂದು
ದುಂಬಿ ಗುನುಗುನುನಾದವರಳಲುದ್ಯಾನಗಳಲ್ಲಿ.

ಉತ್ತರೋತ್ತರಕೊಳಿತ ಬಯಸುತ್ತ ಸುಖಿಸೋಣ
ಮತ್ತೆ ಚೈತ್ರದ ಕಾಲಕಾನೊ ನೀನೋ ಕಾಣೆ..

2 ಕಾಮೆಂಟ್‌ಗಳು: